Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...