Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....