ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ’ಸಮಾನ ಕೆಲಸಕ್ಕೆ ಸಮಾನ ವೇತನ’ ಖಾತರಿ ನೀಡುವ 2017ರ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ, ತನ್ನ ಸಚಿವಾಲಯ ಮತ್ತು ಇಲಾಖೆಗಳ ಅಭಿಪ್ರಾಯ ಕೇಳಿದೆ.
’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಯಾದರೆ ಇದು ಸರ್ಕಾರದ ಸಂಪೂರ್ಣ ಅವಧಿಯ ಕೆಲಸಗಾರರು ಮತ್ತು ತಾತ್ಕಾಲಿಕ ನೇಮಕಾತಿದಾರರು ಸೇರಿದಂತೆ ಲಕ್ಷಾಂತರ ಕಾರ್ಮಿಕರ ಮೇಲೆ ಸಕರಾತ್ಮಕ ಪರಿಣಾಮ ಬೀರಲಿದೆ.
ಅಕ್ಟೋಬರ್ 7 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಎಲ್ಲಾ ಸಚಿವಾಲಯಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ (ಪಿಎಸ್ಯು) ’ಸಮಾನ ಕೆಲಸಕ್ಕೆ ಸಮಾನ ವೇತನ’ದ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದು, ವರದಿ ನೀಡುವಂತೆ ನಿರ್ದೇಶಿಸಿದೆ.
ಎಷ್ಟು ಕಾರ್ಮಿಕರನ್ನು ನೇಮಕ ಮಾಡಲಾಗಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾತ್ಕಾಲಿಕ ಅಥವಾ ಯೋಜನೆ ಆಧಾರಿತ ಹೆಚ್ಚಿನ ಸಂಖ್ಯೆಯ ಕಾರ್ಯಗಳಿಗಾಗಿ ತಾತ್ಕಾಲಿಕ ಕೆಲಸಗಾರರನ್ನು ನೇಮಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡುತ್ತಿದೆ. ಬಡ್ತಿ, ಪಿಂಚಣಿಯಂತಹ ಜೀವಮಾನದ ಪ್ರಯೋಜನಗಳಿಗೆ ಅರ್ಹರಾಗಿರುವ ಶಾಶ್ವತ ಸಿಬ್ಬಂದಿಯ ಬದಲು ತಾತ್ಕಾಲಿಕ ಕೆಲಸಗಾರರ ನೇಮಕಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಸೆಪ್ಟೆಂಬರ್ನಲ್ಲಿ ಡಿಒಪಿಟಿ ಹೊರಡಿಸಿದ ಮತ್ತೊಂದು ಜ್ಞಾಪಕ ಪತ್ರದಲ್ಲಿ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸುಪ್ರೀಂ ಕೋರ್ಟ್ನ ಆದೇಶವನ್ನು ಜಾರಿಗೆ ತರಲು ಉತ್ಸಾಹ ತೋರಿವೆ.
ಇನ್ನು ತಾತ್ಕಾಲಿಕ ಅಥವಾ ಒಪ್ಪಂದದ ಕೆಲಸ ಮಾಡುತ್ತಿರುವವರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನಿಯಮವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ 2017 ರಲ್ಲಿ ತೀರ್ಪು ನೀಡಿತ್ತು. ಇದರಿಂದ ಗುಲಾಮಗಿರಿ, ಶೋಷಣೆ, ದಬ್ಬಾಳಿಕೆಯನ್ನು ನಿಗ್ರಹಿಸಲು ಸಾಧ್ಯ ಎಂದು ನ್ಯಾಯಾಲಯ ಹೇಳಿತ್ತು.
ಇನ್ನು ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳು ಸುಪ್ರೀಂ ಆದೇಶವನ್ನು ಜಾರಿಗೆ ತರುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಮಾರ್ಚ್ನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸಿಡಬ್ಲ್ಯುಸಿ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು / ಪಿಎಸ್ಯುಗಳು / ನಿಗಮಗಳು ಸುಪ್ರೀಂ ಕೋರ್ಟ್ ಘೋಷಿಸಿದ ಕಾನೂನನ್ನು ಅನುಸರಿಸುತ್ತವೆಯೇ ಎಂಬ ಬಗ್ಗೆ ಅಫಿಡವಿಟ್ನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.
ದೆಹಲಿ ಹೈಕೋರ್ಟ್ನ ಸೂಚನೆಯ ನಂತರ, ಸೆಪ್ಟೆಂಬರ್ನಲ್ಲಿ ಜ್ಞಾಪಕ ಪತ್ರದ ಮೂಲಕ ಡಿಒಪಿಟಿ, ಕಾರ್ಮಿಕರು ಮತ್ತು ತಾತ್ಕಾಲಿಕ ಉದ್ಯೋಗಿಗಳಿಗೆ ವಹಿಸಿಕೊಟ್ಟ ಕೆಲಸದ ಸ್ವರೂಪ ಒಂದೇ ಆಗಿದ್ದರೆ, ಕಾರ್ಮಿಕರಿಗೆ 1/30 ನೇ ದರದಲ್ಲಿ ಸಂಬಳ ನೀಡಬಹುದು ಸಂಬಂಧಿತ ವೇತನ ಪ್ರಮಾಣದ ಕನಿಷ್ಠ ವೇತನ ಮತ್ತು ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಭತ್ಯೆ ನೀಡುವುದಾಗಿ ಹೇಳಿದೆ.
ಹೊರಗುತ್ತಿಗೆ ಪದ್ದತಿ ಮೊದಲು ಬಂದ್ ಮಾಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರೆ ವೇತನ ನೀಡಬೇಕು, ಹೊರಗುತ್ತಿಗೆ ಪಡೆದ ಸಂಸ್ಥೆಯವರು ಸೌಕ್ಯವಾಗಿ ಜೀವನ ನೆಡಸುತ್ತಿದ್ದು ಅವರಿಗೆ ತಿಂಗಳಿಗೆ ಕೆಲಸ ಕಾರ್ಯಮಾಡದೇ ಸೇವೆ ತೆರಿಗೆ, ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಕರ್ತವ್ಯ ನಿರ್ವಹಣೆಯ ಮಾಡಿಸುತ್ತಿದ್ದಾರೆ, ಸರ್ಕಾರ ದಲ್ಲಿ ಇರುವ ಮುಖ್ಯಕಾರ್ಯದರ್ಶಿಗಳು ಯಾವರೀತಿ ಇದೇ ಈ ಪದ್ದತಿ ಅನ್ನೂವದರ ಬಗ್ಗೆ ಒಂದು ಸಲನೂ ನೋಡೇಯಿಲ್ಲ ಮೊದಲು ಈ ಪದ್ದತಿ ರದ್ದ ಮಾಡಬೇಕು.
ಮೇಲೆ ಹೇಳಿರುವದು ದೇವರ ಮೇಲೆ ಪ್ರಮಾಣ ಮಾಡಿದಷ್ಟು ಸತ್ಯ
ಪ್ರತಿ ವರ್ಷ ಬೇರೆ ಬೇರೆ ಎಜೆನ್ಸಿಗೆ ಟೆಂಡರ ಕೊಟ್ಟು ತಮ್ಮ ಲಾಭವನ್ನ ಅನುಭವಿಸುತ್ತಾರೆ . ನಮ್ಮಂತ ಯುವ ಬಡ ಹುಡಗರು 10000=00 ಅಥವಾ 12000=00 ರೂಪಾಯಿ ದಿನ ಜಂಜಾಟದಲ್ಲಿ ಅಧಿಕಾರಿಯ ಆಳ್ವಿಕೆಯಲ್ಲಿ ನಾವುಗಳು ನಾಯಿಯ ತರ ಕಾಣುತ್ತಿದ್ದೇವೆ ನಾನೇ 2013-14 ಸಾಲಿನ ಒಂದು ವರ್ಷದ ವೇತನ ಕೊಟ್ಟಿಲ್ಲ