Homeಅಂತರಾಷ್ಟ್ರೀಯಭಾರತ‌ದಲ್ಲಿ ನಡೆಯುವ ಎಸ್‌ಸಿಒ ಸಭೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ?

ಭಾರತ‌ದಲ್ಲಿ ನಡೆಯುವ ಎಸ್‌ಸಿಒ ಸಭೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ?

- Advertisement -
- Advertisement -

ಈ ವರ್ಷ ನಡೆಯುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ)ಯ ಸರ್ಕಾರದ ಮುಖ್ಯಸ್ಥರ ವಾರ್ಷಿಕ ಸಭೆಗೆ ಭಾರತವು ಆತಿಥ್ಯ ವಹಿಸಿದ್ದು, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಹ ಆಹ್ವಾನಿಸಲಿದೆ ಎಂದು ಕೆಲವು ಅಧಿಕಾರಿಗಳು ಹೇಳಿರುವುದಾಗಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

ಆದಾಗ್ಯೂ, ಈ ವರ್ಷ ನಡೆಯಲಿರುವ ಸಭೆಯಲ್ಲಿ ಪಾಕ್‌ ಪಿಎಂ ಇಮ್ರಾನ್‌ ಖಾನ್ ಭಾಗವಹಿಸುತ್ತಾರೆಯೇ ಎಂಬ ಬಗ್ಗೆ ಅಂತಿಮ ತೀರ್ಮಾನವನ್ನು ಇಸ್ಲಾಮಾಬಾದ್ ತೆಗೆದುಕೊಳ್ಳುತ್ತದೆ ಎಂದು ವರದಿ ಉಲ್ಲೇಖಿಸಿದೆ.

“ಪ್ರೋಟೋಕಾಲ್ ಮತ್ತು ಸಮಾವೇಶದ ಪ್ರಕಾರ, ಪಾಕಿಸ್ತಾನದ ಪ್ರಧಾನ ಮಂತ್ರಿಗೆ ಆಹ್ವಾನವನ್ನು ನೀಡಲಾಗುವುದು. ಅವರ ಪರವಾಗಿ ಪ್ರಧಾನಿ ಅಥವಾ ಇನ್ನಾವುದೇ ಪ್ರತಿನಿಧಿ ಸಭೆಗೆ ಹಾಜರಾಗುತ್ತಾರೆಯೇ ಎಂಬುದು ಪಾಕಿಸ್ತಾನಕ್ಕೆ ಬಿಟ್ಟದ್ದು. ಇದಲ್ಲದೆ, ಸಭೆಗೆ ಇನ್ನೂ ಬಹಳ ಸಮಯವಿದೆ,” ಎಂದು ಹೆಸರಿಸಲು ನಿರಾಕರಿಸಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಎಸ್‌ಸಿಒ ಸರ್ಕಾರದ ಮುಖ್ಯಸ್ಥರ ಸಭೆಯನ್ನು ಭಾರತ ಮೊದಲ ಬಾರಿಗೆ ಆಯೋಜಿಸುತ್ತಿದೆ ಎಂದು ಎಸ್‌ಸಿಒ ಪ್ರಧಾನ ಕಾರ್ಯದರ್ಶಿ ವ್ಲಾಡಿಮಿರ್ ನೊರೊವ್ ಸೋಮವಾರ ನವದೆಹಲಿಯಲ್ಲಿ ನೆರೆದ ಸುದ್ದಿಗಾರರಿಗೆ ತಿಳಿಸಿದ್ದರು.

ನಾಲ್ಕು ದಿನಗಳ ಭೇಟಿಯಲ್ಲಿ ಭಾನುವಾರ ನವದೆಹಲಿಗೆ ಆಗಮಿಸಿದ ನೊರೊವ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎಸ್‌ಸಿಒ ಸಭೆಯಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆಯು ಚರ್ಚೆಗಳಲ್ಲಿ ಕಾಣಿಸಿಕೊಂಡಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

“ಶಾಂಘೈ ಸಹಕಾರ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವ್ಲಾಡಿಮಿರ್ ನೊರೊವ್‌ರವರನ್ನು ಬರಮಾಡಿಕೊಂಡೆವು. SCO ಸರ್ಕಾರದ ಮುಖ್ಯಸ್ಥರ ಮಂಡಳಿಯ ಸಭೆಯ ಆತಿಥ್ಯವನ್ನು ವಹಿಸಿಕೊಳ್ಳಲು ಭಾರತ ಸಿದ್ಧತೆ ನಡೆಸುತ್ತಿರುವಾಗ ನಮ್ಮ ಸಹಕಾರದ ಪ್ರಗತಿಯನ್ನು ಪರಿಶೀಲಿಸಿದ್ದಾರೆ”ಎಂದು ಜೈಶಂಕರ್ ಟ್ವೀಟ್ ಮಾಡಿದ್ದರು.

ಈ ವರ್ಷ ಎಸ್‌ಸಿಒ ಸರ್ಕಾರಿ ಮುಖ್ಯಸ್ಥರ ಸಭೆಯನ್ನು ಭಾರತ ಆಯೋಜಿಸುತ್ತಿರುವುದಕ್ಕೆ ಎಲ್ಲಾ ಎಸ್‌ಸಿಒ ಸದಸ್ಯರು ಸಂತೋಷಪಟ್ಟಿದ್ದಾರೆ ಎಂದು ನೊರೊವ್ ಸೋಮವಾರ ಹೇಳಿದ್ದಾರೆ. ಭಾರತವು ಈ ಪ್ರದೇಶದ ಪ್ರಮುಖ ದೇಶವಾಗಿದ್ದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೊಡ್ಡ ಸಾಮರ್ಥ್ಯವನ್ನು ಹೊಂದಿದೆ ಎಂದರು.

ಆರ್ಥಿಕ ಚಟುವಟಿಕೆಗಳ ಎಸ್‌ಸಿಒ ಮಂತ್ರಿಗಳ ಸಭೆ ಸೇರಿದಂತೆ ಭಾರತದಲ್ಲಿ ಹಲವಾರು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದರು.

ಭಾರತವು 2005 ರಿಂದ ಎಸ್‌ಸಿಒದಲ್ಲಿ ವೀಕ್ಷಕರಾಗಿದ್ದರು ಮತ್ತು ಸಾಮಾನ್ಯವಾಗಿ ಯುರೇಷಿಯನ್ ಪ್ರದೇಶದಲ್ಲಿನ ಭದ್ರತೆ ಮತ್ತು ಆರ್ಥಿಕ ಸಹಕಾರವನ್ನು ಕೇಂದ್ರೀಕರಿಸುವ ಗುಂಪಿನ ಮಂತ್ರಿಮಟ್ಟದ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಎರಡೂ ಜೂನ್ 2017 ರಲ್ಲಿ ಎಸ್‌ಸಿಒದ ಪೂರ್ಣ ಸದಸ್ಯರಾದರು ಮತ್ತು ಚೀನಾ ಪ್ರಾಬಲ್ಯದ ಗುಂಪಿನಲ್ಲಿ ನವದೆಹಲಿಯ ಪ್ರವೇಶವು ಅದರ ವೇಗವನ್ನು ಹೆಚ್ಚಿಸಿದೆ.

ರಷ್ಯಾ, ಚೀನಾ, ಕಿರ್ಗಿಜ್ ರಿಪಬ್ಲಿಕ್, ಕಜಕಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರ ನೇತೃತ್ವದಲ್ಲಿ 2001 ರಲ್ಲಿ ಶಾಂಘೈನಲ್ಲಿ ನಡೆದ ಶೃಂಗಸಭೆಯಲ್ಲಿ ಎಸ್‌ಸಿಒ ಸ್ಥಾಪಿಸಲಾಯಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...