Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...