Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...