Homeಮುಖಪುಟಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

ಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

- Advertisement -
- Advertisement -

ಆರ್ಥಿಕ ಕುಸಿತದ ಮಧ್ಯೆ ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಉದ್ಯೋಗ ಕಡಿತದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ನಿರುದ್ಯೋಗ ಹೆಚ್ಚಳದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಐಟಿ ಕಂಪನಿಗಳು ನಷ್ಟ ಸರಿದೂಗಿಸಲು ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಿದ್ದಾರೆ. ಕೇಂದ್ರ ನೀತಿಗಳ ಕಾರಣದಿಂದಾಗ ಆರ್ಥಿಕ  ಕುಸಿತದಿಂತ ಹೀಗಾಗುತ್ತಿದ್ದು, ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

“ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ಆಡಳಿತವು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ಯೋಚಿಸಿಲ್ಲ, ಇದು ರಾಜ್ಯಕ್ಕೆ ಶಾಪವಾಗಿದೆ. ತಮಿಳುನಾಡಿನ ಐಟಿ ಸಂಸ್ಥೆಗಳು ಈಗಾಗಲೇ ತನ್ನ ಅನೇಕ ಉದ್ಯೋಗಿಗಳನ್ನು ವಜಾ ಮಾಡಲು ಕೆಲವು ನಕಲಿ ಕಾರಣಗಳನ್ನು ನೀಡುತ್ತಿವೆ. ಈ ನಡುವೆ ಬಿಜೆಪಿಯ ಕಳಪೆ ಆರ್ಥಿಕ ಯೋಜನೆಗಳಿಂದಾಗಿ ದೇಶದಲ್ಲಿ 40,000 ಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ದರವು 4.5% ಕ್ಕೆ ಕುಸಿದಿದೆ. ಇದು ಜನವರಿ-ಮಾರ್ಚ್ 2013 ರ ನಂತರದ ಅತ್ಯಂತ ಕನಿಷ್ಠ ಮಟ್ಟವಾಗಿದೆ. ಇದು ಸತತ ಐದನೇ ತ್ರೈಮಾಸಿಕ ಕುಸಿತವನ್ನು ಸೂಚಿಸುತ್ತದೆ. ಈ ಬೆಳವಣಿಗೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸ್ಟಾಲಿನ್‌  “ಜಿಡಿಪಿ 4.5% ಕ್ಕೆ ಕುಸಿದಿದ್ದು ಕಳೆದ ಆರು ವರ್ಷಗಳಲ್ಲಿ ಕಡಿಮೆ ಆರ್ಥಿಕ ಬೆಳವಣಿಗೆಯ ದರವಾಗಿದೆ. ಇದು ಕೇವಲ ಆರ್ಥಿಕ ಬೆಳವಣಿಗೆ ನಿಧಾನಗತಿಯಲ್ಲ, ಇದು ದೊಡ್ಡ ಆರ್ಥಿಕ ಬಿಕ್ಕಟ್ಟಾಗಿದೆ. ಸರ್ಕಾರವು ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕು ಮತ್ತು ಅಸಲಿ ಆರ್ಥಿಕ ಕಾರ್ಯತಂತ್ರವನ್ನು ತಿಳಿಸಲು ಪ್ರಾರಂಭಿಸಬೇಕು” ಎಂದಿದ್ದಾರೆ.

ಇದಲ್ಲದೆ, ನಿರುದ್ಯೋಗವನ್ನು ತಡೆಗಟ್ಟುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಆಸಕ್ತಿ ತೋರಿಸದಿರುವುದನ್ನು ಅವರು ಖಂಡಿಸಿದ್ದಾರೆ. “ಈ ದೇಶದ ಭವಿಷ್ಯವೆಂದು ಪರಿಗಣಿಸಲ್ಪಟ್ಟಿರುವ ಯುವಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಆಟವನ್ನು ಆಡುತ್ತಿವೆ. ಆದ್ದರಿಂದ, ನಿರುದ್ಯೋಗ ಮತ್ತು ಐಟಿ ಉದ್ಯೋಗಿಗಳನ್ನು ದೊಡ್ಡ ಮಟ್ಟದಲ್ಲಿ ವಜಾ ಮಾಡುವ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಾಜ್ಯದ ಎಐಎಡಿಎಂಕೆ ಮತ್ತು ಕೇಂದ್ರದ ಬಿಜೆಪಿಯನ್ನು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂದೇಶ್‌ಖಾಲಿ ಘಟನೆಗಳ ಬಗ್ಗೆ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಟಿಎಂಸಿ

0
ಸ್ಥಳೀಯ ಬಿಜೆಪಿ ನಾಯಕಿಯೊಬ್ಬರು ಟಿಎಂಸಿ ನಾಯಕರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಲು ಖಾಲಿ ಪೇಪರ್‌ಗಳ ಮೇಲೆ ಅನೇಕ ಮಹಿಳೆಯರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಹೊಸದಾಗಿ ಹೊರಬಂದ ಹಲವಾರು ವೀಡಿಯೊಗಳ ನಂತರ ತೃಣಮೂಲ...