Homeಕರ್ನಾಟಕಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

- Advertisement -
- Advertisement -

ಈಕ್ವಿಟಿ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಆಲಿಸಿದ ನ್ಯಾಯಾಲಯವು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿದೆ.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಅರ್ಜಿದಾರರು ಸತ್ಯ ಸಾಯಿಬಾಬಾ ಅವರು ಸಾರ್ವಜನಿಕರಿಂದ ಹಣವನ್ನು ತೆಗೆದುಕೊಳ್ಳದೆ ಆಂಧ್ರಪ್ರದೇಶದಿಂದ ಚೆನ್ನೈಗೆ ಕುಡಿಯುವ ನೀರನ್ನು ತರುವ ಯೋಜನೆಯನ್ನು ಕೈಗೆತ್ತಿಕೊಂಡ ಉದಾಹರಣೆಯನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...