Homeಮುಖಪುಟಬಿಜೆಪಿಯಲ್ಲಿರುವ ಯಡಿಯೂರಪ್ಪನವರನ್ನು ಕಂಡರೆ ಆಗದವರು ಆಡಿಯೋ ಲೀಕ್‌ ಮಾಡಿದ್ದಾರೆ: ಸಿದ್ದು

ಬಿಜೆಪಿಯಲ್ಲಿರುವ ಯಡಿಯೂರಪ್ಪನವರನ್ನು ಕಂಡರೆ ಆಗದವರು ಆಡಿಯೋ ಲೀಕ್‌ ಮಾಡಿದ್ದಾರೆ: ಸಿದ್ದು

- Advertisement -
- Advertisement -

ನಮ್ಮ 80 ಜನ ಶಾಸಕರಿದ್ದು ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ರಲ್ಲ ಎಂದು ನಮ್ಮ‌ ಕಾರ್ಯಕರ್ತರೊಬ್ಬರು ಕೇಳಿದ್ದರು. ಅದಕ್ಕೆ ಲೋಕಸಭಾ ಚುನಾವಣೆ ಆಗುವವರೆಗೂ ತಾಳ್ಮೆಯಿಂದಿರಿ, ಚುನಾವಣೆಯ ನಂತರ ಕೂತು ಮಾತನಾಡೋಣ ಎಂದಿದ್ದೆ. ನಾನು ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿಲ್ಲ, ಆ ಪ್ರಯತ್ನವನ್ನೂ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ‌ ಎಂಬ ಕಾರಣಕ್ಕೆ ಆಡಿಯೋ ಲೀಕ್ ಮಾಡಿದ್ದಾರೆ. ಹಿರಿಯ ನಾಯಕರಷ್ಟೇ ಇರುವ ಬಿಜೆಪಿಯ ಕೋರ್ ಕಮಿಟಿಯಲ್ಲೇ ಯಡಿಯೂರಪ್ಪ ಅವರಿಗೆ ಆಗದವರು ಇದ್ದಾರೆ ಅಲ್ಲವೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ನಿಂದ ಬೇರೇನು ನಿರೀಕ್ಷೆ ಮಾಡಲು ಸಾಧ್ಯ? ಇನ್ನಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಬಹುದೆಂಬ ಭಯಕ್ಕೆ ಅವರು ಹಾಗೆ ಮಾತನಾಡಿರಲೂಬಹುದು. ಇದು ನಿರೀಕ್ಷಿತ ರಾಜಕೀಯ ಬೆಳವಣಿಗೆಯಾಗಿದೆ ಎಂದಿದ್ದಾರೆ.

ನೋಟು ರದ್ದತಿ, ಅವೈಜ್ಞಾನಿಕ ಹಾಗೂ ಅಸಮರ್ಪಕ ಜಿಎಸ್‌ಟಿ ಜಾರಿ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವೈಫಲ್ಯ ದೇಶದ ಆರ್ಥಿಕ ಹಿಂಜರಿತಕ್ಕೆ ಬಹುಮುಖ್ಯ ಕಾರಣಗಳು. ಹಸಿವಿನ ಪ್ರಮಾಣ ಹೆಚ್ಚಿರುವ 118 ದೇಶಗಳ ಪಟ್ಟಿಯಲ್ಲಿ ಭಾರತ 102ನೇ ಸ್ಥಾನದಲ್ಲಿದೆ. ಇದು ದೇಶದ ಪಾಲಿನ ಕರಾಳ ದಿನಗಳು. ‘ಭಾರತ್ ಮೇ ಸಬ್ ಅಚ್ಚಾ ಹೇ’ ಎಂದರೆ ಇದಾ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಈ ಕುರಿತು ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಪ್ರಕಟಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...