Homeಚಳವಳಿನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

ನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ಶಿಲ್ಪಿ ಎಂದು ನೆನಪಿಸಿಕೊಳ್ಳಲಾಗುತ್ತದೆ. ಆದರೆ, ಸಂವಿಧಾನ ಸಭೆಯಲ್ಲಿದ್ದ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಐವರ ಕಿರುಪರಿಚಯವನ್ನು ಈ ಮೊದಲ ಭಾಗದಲ್ಲಿ ನೀಡಲಾಗಿದೆ. 

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

1. ಅಮ್ಮು ಸ್ವಾಮಿನಾಥನ್

ಅಮ್ಮು ಸ್ವಾಮಿನಾಥನ್ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಆನಕ್ಕರ ಎಂಬಲ್ಲಿ ಮೇಲ್ಜಾತಿಯ ಹಿಂದೂ ಕುಟುಂಬವೊಂದರಲ್ಲಿ ಜನಿಸಿದರು. ಅವರು 1917ರಲ್ಲಿ ಅನ್ನಿ ಬೆಸೆಂಟ್, ಮಾರ್ಗರೆಟ್ ಕಸಿನ್ಸ್, ಮಾಲತಿ ಪಟವರ್ಧನ್, ದಾದಾಭೋಯ್ ಮತ್ತು ಅಂಬುಜಮ್ಮಾಳ್ ಅವರ ಜೊತೆ ಸೇರಿ ವುಮನ್ಸ್ ಇಂಡಿಯಾ ಅಸೋಸಿಯೇಷನ್ ಎಂಬ ಸಂಘಟನೆಯನ್ನು ಕಟ್ಟಿದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಡಾ. ಬಿ.ಆರ್. ಅಂಬೇಡ್ಕರ್ ಅವರು 24 ನವೆಂಬರ್ 1949ರಲ್ಲಿ ಕರಡು ಸಂವಿಧಾನವನ್ನು ಅಂಗೀಕರಿಸುವ ಗೊತ್ತುವಳಿಯನ್ನು ಮಂಡಿಸಿದಾಗ ಆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅಮ್ಮು ಸ್ವಾಮಿನಾಥನ್ ಅವರು, “ಭಾರತವು ತನ್ನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕೊಟ್ಟಿಲ್ಲ ಎಂದು ಹೊರಗಿನವರು ಹೇಳುತ್ತಿದ್ದರು. ಆದರೆ, ಭಾರತೀಯ ಜನರು ತಮ್ಮ ಸ್ವಂತ ಸಂವಿಧಾನವನ್ನು ರೂಪಿಸಿದಾಗ ಮಹಿಳೆಯರಿಗೆ ದೇಶದ ಯಾವುದೇ ನಾಗರಿಕನಿಗೆ ಇರುವಷ್ಟೇ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ನಾವೀಗ ಹೇಳಬಹುದು” ಎಂದು ಹೇಳಿದ್ದರು.

ಅವರು 1952ರಲ್ಲಿ ಲೋಕಸಭೆಗೆ ಮತ್ತು 1954ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಚಲನಚಿತ್ರ ಚಿತ್ರಗಳಲ್ಲಿ ಅತ್ಯಂತ ಆಸಕ್ತಿಯಿದ್ದ ಅವರು 1959ರಲ್ಲಿ  ಫೆಡರೇಷನ್ ಆಫ್ ಫಿಲ್ಮ್ ಸೊಸೈಟೀಸ್‌ನ ಉಪಾಧ್ಯಕ್ಷರಾದರು. ಆಗ ಸತ್ಯಜಿತ್ ರಾಯ್ ಅಧ್ಯಕ್ಷರಾಗಿದ್ದರು. ಅವರು ಸೆನ್ಸಾರ್ ಮಂಡಳಿ ಮತ್ತು ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ (1960-65) ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು.

2. ದಾಕ್ಷಾಯಣಿ ವೇಲಾಯುಧನ್

ದಾಕ್ಷಾಯಣಿ ವೇಲಾಯುಧನ್ ಅವರು 1912ರ ಜುಲೈ 4ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ಜನಿಸಿದರು. ಅತ್ಯಂತ ಅವಗಣಿತ ಪುಲಯ ಸಮುದಾಯದ ನಾಯಕಿಯಾಗಿದ್ದ ಅವರು ಈ ಸಮುದಾಯದ ಮೊದಲ ತಲೆಮಾರಿನ ವಿದ್ಯಾವಂತೆಯಾಗಿದ್ದು, ಈ ಸಮುದಾಯದಲ್ಲಿ ರವಕೆ ಧರಿಸಿದ ಮೊದಲ ಮಹಿಳೆ.

1945ರಲ್ಲಿ ದಾಕ್ಷಾಯಣಿ ಅವರನ್ನು ರಾಜ್ಯ ಸರಕಾರ ಕೊಚ್ಚಿ ವಿಧಾನ ಮಂಡಳಿಗೆ ನಾಮಕರಣ ಮಾಡಿತು. 1946ರಲ್ಲಿ ಅವರು ಸಂವಿಧಾನ ಸಭೆಗೆ ಆಯ್ಕೆಯಾದ ಮೊದಲ ಮತ್ತು ಏಕೈಕ ದಲಿತ ಮಹಿಳೆ ಎನಿಸಿದರು. ಸಂವಿಧಾನ ಸಭೆಯ ಚರ್ಚೆಗಳ ವೇಳೆ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಅಂಬೇಡ್ಕರ್ ಪರವಾಗಿ ನಿಂತಿದ್ದರು.

3. ಬೇಗಂ ಐಝಾಝ್ ರಸೂಲ್

ಮಾಲೇರ್ ಕೋಟ್ಲಾದ ರಾಜಮನೆತನದಲ್ಲಿ ಹುಟ್ಟಿದ ಅವರು ಯುವ ಜಮೀನ್ದಾರ ನವಾಬ್ ಐಝಾಝ್ ರಸೂಲ್ ಅವರನ್ನು ಮದುವೆಯಾದರು. ಅವರು ಸಂವಿಧಾನ ಸಭೆಯಲ್ಲಿದ್ದ ಏಕೈಕ ಮುಸ್ಲಿಂ ಮಹಿಳೆ. 1935ರ ಭಾರತ ಸರಕಾರ ಕಾಯಿದೆ ಜಾರಿಗೆ ಬಂದಾಗ ಬೇಗಂ ಹಾಗೂ ಅವರ ಗಂಡ ಮುಸ್ಲಿಂ ಲೀಗ್ ಸೇರಿ ಚುನಾವಣಾ ರಾಜಕೀಯಕ್ಕೆ ಧುಮುಕಿದರು. 1937ರ ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು.

ಚಿತ್ರಕೃಪೆ: ಎನ್‌ಡಿಟಿವಿ

1950ರಲ್ಲಿ ಭಾರತದಲ್ಲಿ ಮುಸ್ಲಿಂ ಲೀಗ್ ವಿಸರ್ಜನೆಗೊಂಡಾಗ ಬೇಗಂ ಐಝಾಝ್ ರಸೂಲ್ ಕಾಂಗ್ರೆಸ್ ಸೇರಿದರು. 1952ರಲ್ಲಿ ಅವರು ರಾಜ್ಯಸಭೆಗೆ ಆಯ್ಕೆಯಾದರು. ಅವರು 1969ರಿಂದ 1990ರ ತನಕವೂ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯೆಯಾಗಿದ್ದರು. 1971ರಿಂದ 1971ರ ತನಕ ಅವರು ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವೆಯಾಗಿದ್ದರು. 2000ದಲ್ಲಿ ಸಮಾಜಸೇವೆಗಾಗಿ ಅವರಿಗೆ ಪದ್ಮಭೂಷಣದ ಗೌರವ ಸಿಕ್ಕಿತು.

4. ದುರ್ಗಾಬಾಯಿ ದೇಶ್‌ಮುಖ್

ದುರ್ಗಾಬಾಯಿಯವರು 15 ಜುಲೈ 1909ರಲ್ಲಿ ರಾಜಮುಂದ್ರಿಯಲ್ಲಿ ಹುಟ್ಟಿದರು. 12ರ ಹರೆಯದಲ್ಲಿಯೇ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು. ಆಂಧ್ರ ಕೇಸರಿ ಟಿ. ಪ್ರಕಾಶಂ ಅವರ ಜೊತೆ 1930ರ ಮೇಯಲ್ಲಿ ಮದ್ರಾಸ್ ನಗರದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದರು. 1936ರಲ್ಲಿ ಅವರು ಆಂಧ್ರ ಮಹಿಳಾ ಸಭಾವನ್ನು ಸ್ಥಾಪಿದರು. ಅದು ಒಂದೇ ದಶಕದ ಅವಧಿಯಲ್ಲಿ ಮದ್ರಾಸಿನಲ್ಲಿ  ಮಹಾನ್ ಶೈಕ್ಷಣಿಕ ಮತ್ತು ಸಮಾಜಸೇವಾ ಸಂಸ್ಥೆ ಎನಿಸಿಕೊಂಡಿತು.

ಚಿತ್ರಕೃಪೆ: ವಿಮೆನ್ಸ್‌ ವೆಬ್‌

ಅವರು ಕೇಂದ್ರೀಯ ಸಮಾಜ ಕಲ್ಯಾಣ ಮಂಡಳಿ, ರಾಷ್ಟ್ರೀಯ ಮಹಿಳಾ ಶಿಕ್ಷಣ ಮಂಡಳಿ, ಹೆಣ್ಣು ಮಕ್ಕಳು ಮತ್ತು ಮಹಿಳಾ ಶಿಕ್ಷಣ ರಾಷ್ಟ್ರೀಯ ಸಮಿತಿ ಮುಂತಾದ ಸಂಸ್ಥೆಗಳ ಅಧ್ಯಕ್ಷೆಯಾಗಿದ್ದರು. ಅವರು ಸಂಸದೆಯೂ, ಯೋಜನಾ ಆಯೋಗದ ಸದಸ್ಯೆಯೂ ಆಗಿದ್ದರು.

ಅವರು ದಿಲ್ಲಿಯ ಆಂಧ್ರ ಎಜುಕೇಶನಲ್ ಸೊಸೈಟಿಯೊಂದಿಗೆ ಸಂಬಂಧ ಹೊಂದಿದ್ದರು. ಭಾರತದಲ್ಲಿ ಸಾಕ್ಷರತೆಗೆ ಅವರ ಅಮೋಘ ಕೊಡುಗೆಗಾಗಿ 1971ರಲ್ಲಿ ಅವರಿಗೆ ನಾಲ್ಕನೇ ನೆಹರೂ ಸಾಹಿತ್ಯ ಪ್ರಶಸ್ತಿ ನೀಡಲಾಯಿತು. 1975ರಲ್ಲಿ ಅವರಿಗೆ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.

5. ಹಂಸಾ ಜೀವರಾಜ್ ಮೆಹ್ತಾ

ಬರೋಡದ ದಿವಾನ ಮನುಭಾಯ್ ನಂದಶಂಕರ ಮೆಹ್ತಾ ಅವರ ಮಗಳಾಗಿ ಜೂನ್ 3, 1879ರಲ್ಲಿ ಹುಟ್ಟಿದ ಹಂಸಾ ಅವರು ಇಂಗ್ಲೆಂಡ್‌ನಲ್ಲಿ ಪತ್ರಿಕೋದ್ಯಮ ಮತ್ತು ಸಮಾಜಶಾಸ್ತ್ರ ಕಲಿತಿದ್ದರು. ಸಮಾಜ ಸುಧಾರಕಿ, ಕಾರ್ಯಕರ್ತೆ, ಶಿಕ್ಷಣ ತಜ್ಞೆ ಹಾಗೂ ಲೇಖಕಿಯಾಗಿಯೂ ಹೆಸರು ಪಡೆದಿದ್ದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಅವರು ಗುಜರಾತಿಯಲ್ಲಿ ಮಕ್ಕಳಿಗಾಗಿ ಹಲವಾರು ಪುಸ್ತಕಗಳನ್ನು ಬರೆದಿದ್ದು, ‘ಗಲಿವರ್‌ನ ಯಾತ್ರೆಗಳು’ ಸೇರಿದಂತೆ ಹಲವು ಇಂಗ್ಲಿಷ್ ಕತೆಗಳನ್ನು ಅನುವಾದಿಸಿದ್ದಾರೆ. ಅವರು 1926ರಲ್ಲಿ ಬಾಂಬೆ ಸ್ಕೂಲ್ ಕಮಿಟಿಗೆ ಆಯ್ಕೆಯಾದರು. 1945-46ರಲ್ಲಿ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್‌ನ ಅಧ್ಯಕ್ಷೆಯಾದರು. ಹೈದರಾಬಾದ್‌ನಲ್ಲಿ ನಡೆದ ಅದರ ಸಮಾವೇಶದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿ ಮಹಿಳಾ ಹಕ್ಕುಗಳ ಕುರಿತು ಕಾರ್ಯಕ್ರಮಪಟ್ಟಿಯನ್ನು ಮಂಡಿಸಿದ್ದರು.

ಅವರು 1945ರಿಂದ 1960ರ ತನಕ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ, ಅಖಿಲ ಭಾರತ ಮಾಧ್ಯಮಿಕ ಶಿಕ್ಷಣ ಮಂಡಳಿಯ ಸದಸ್ಯೆ, ಭಾರತೀಯ ಅಂತರವಿಶ್ವವಿದ್ಯಾಲಯ ಮಂಡಳಿಯ ಅಧ್ಯಕ್ಷೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದ ಉಪಕುಲಪತಿ ಇತ್ಯಾದಿಯಾಗಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....